Friday, September 20, 2024

archiveSiddaramayyaih

ರಾಜಕೀಯ

ಸಕತ್ ಫಿಟ್ ಸಕತ್ ಸ್ಲಿಮ್ ” ಸ್ಲಿಮ್ ಸಿದ್ದು “- ಪ್ರಕೃತಿ ಚಿಕಿತ್ಸೆ ಪಡೆದು ತೂಕ ಇಳಿಸಿಕೊಂಡ ಮಾಜಿ ಮುಖ್ಯಮಂತ್ರಿ – ಕಹಳೆ ನ್ಯೂಸ್

ಬೆಳ್ತಂಗಡಿ, ಜೂ 27: ಧರ್ಮಸ್ಥಳದ ಶಾಂತಿವನ ಯೋಗ ಮತ್ತು ಪ್ರಕೃತಿ ಚಿಕಿತ್ಸಾಯಲಯದಲ್ಲಿ ಪ್ರಕೃತಿ ಚಿಕಿತ್ಸೆಗಾಗಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ದಾಖಲಾಗಿ ಅಲ್ಲಿ ಹನ್ನೊಂದು ದಿನಗಳನ್ನು ಕಳೆದಿದ್ದಾರೆ. ರಾಜಕೀಯದ ಬಿರುಸಿನ ಕಾರ್ಯಚಟುವಟಿಕೆಯಿಂದ ಶುಗರ್, ಬಿಪಿ ಹೆಚ್ಚಿಸಿಕೊಂಡಿದ್ದ 69ರ ಹರೆಯದ ಸಿದ್ದರಾಮಯ್ಯ ಚಿಕಿತ್ಸೆಯ ಸಂದರ್ಭದಲ್ಲಿ ಮಾಂಸಾಹಾರ ಸಂಪೂರ್ಣ ವರ್ಜಿಸಿ ರಾಗಿ ಗಂಜಿ ,ಹಸಿ ತರಕಾರಿ, ಮೊಳಕೆ ಕಾಳು, ಸಲಾಡ್ ಮತ್ತು ಮಜ್ಜಿಗೆ ಇವುಗಳನ್ನು ಸೇವನೆ ಮಾಡುತ್ತಿದ್ದರು. ಇದರ ಜತೆಗೆ ಉಪ್ಪು, ಹುಳಿ, ಖಾರ ನಿಷಿದ್ದ...
ರಾಜಕೀಯ

ಅವರಪ್ಪನಾಣೆ ಯಡಿಯೂರಪ್ಪ ಮುಖ್ಯಮಂತ್ರಿಯಾಗಲ್ಲ, ಜೆಡಿಎಸ್’ಗೆ 25 ಸೀಟು ಗೆದ್ರೆ ಅದೇ ಹೆಚ್ಚು – ಕಹಳೆ ನ್ಯೂಸ್

ಮುಧೋಳ : ಚುನಾವಣಾ ಸಭೆಯನ್ನುದ್ದೇಶಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಬಿ.ಎಸ್. ಯಡಿಯೂರಪ್ಪ ಹಾಗೂ ಜೆಡಿಎಸ್ ವಿರುದ್ಧ ಹರಿಹಾಯ್ದಿದ್ದಾರೆ. ಯಡಿಯೂರಪ್ಪ ಸಿಎಂ ಆಗುವ ಹಗಲುಗನಸು ಕಾಣುತ್ತಿದ್ದಾರೆ ಹಾಗೂ ಜೆಡಿಎಸ್ 25 ಕ್ಷೇತ್ರಗಳನ್ನು ಗೆದ್ದರೆ ಅದೇ ಹೆಚ್ಚು ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಸರ್ವಪಕ್ಷ ನಿಯೋಗದೊಂದಿಗೆ ಪ್ರಧಾನಿ ಮೋದಿಯವರನ್ನು ಭೇಟಿಯಾಗಿ, ರೈತರ ಸಾಲಮನ್ನಾ ಮಾಡಿ ಎಂದು ಗೊಗೆರದರೂ ಕೂಡಾ ಮೋದಿ ಜಪ್ಪಯ್ಯ ಎನ್ನಲಿಲ್ಲ. ನೀವಾದರೂ ಹೇಳಿ ಎಂದು ಬಿಜೆಪಿಯವರಿಗೆ ಮನವಿ ಮಾಡಿಕೊಂಡರೂ ಯಾವನೇ ಒಬ್ಬ...
ರಾಜಕೀಯ

ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸಿ.ಎಂ ಪ್ರಚಾರ : ಬೈದು ಕಳುಹಿಸಿದ ಜೆಡಿಎಸ್ ಕಾರ್ಯಕರ್ತ

ಮೈಸೂರು: ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಮುಖ್ಯಮಂತ್ರಿ  ಸಿದ್ದರಾಮಯ್ಯ ಪ್ರಚಾರ ನಡೆಸಿದ್ದಾರೆ. ಈ ಸಂದರ್ಭ  ಪ್ರಚಾರದಲ್ಲಿ‌ ಜೆಡಿಎಸ್ ಕಾರ್ಯಕರ್ತರೊಬ್ಬರು ಸಿಎಂರನ್ನು ಬೈದು ಕಳುಹಿಸಿದ್ದಾರೆ. ಮೈಸೂರಿನ ಹಳೆಕೆಸರೆ ಗ್ರಾಮದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಜೆಡಿಎಸ್ ಕಾರ್ಯಕರ್ತ ಮರಿಸ್ವಾಮಿ ನಡುವೆ ಮಾತಿನ ಜಟಾಪಟಿ ನಡೆದಿದೆ. ಮರಿಸ್ವಾಮಿ ಸಿದ್ದಲಿಂಗಪುರ ಗ್ರಾಮ ಪಂಚಾಯಿತಿಯ ಜೆಡಿಎಸ್ ಸದಸ್ಯರಾಗಿದ್ದಾರೆ. ಇವರನ್ನು ಸಿದ್ದರಾಮಯ್ಯ ಅವರು ಹೇ ಮರಿಸ್ವಾಮಿ ನೀ ನನ್ನ ಜೊತೆ ಇದ್ದಲ್ಲಯ್ಯ ಬಾ ಎಂದು ಕರೆದಿದ್ದಾರೆ. ನಾನು ಜೆಡಿಎಸ್‌ನಲ್ಲಿದ್ದೇನೆ ಬರೋದಿಲ್ಲ...
ರಾಜಕೀಯ

ಸಿ.ಎಂ. ಸೋಲಿಸಲು ಬಿ.ಜೆ.ಪಿ. ಮಾಸ್ಟರ್ ಪ್ಲಾನ್ – ಕಹಳೆ ನ್ಯೂಸ್

ಮುಖ್ಯಮಂತ್ರಿ ಸಿದ್ಧರಾಮಯ್ಯ ಚಾಮುಂಡೇಶ್ವರಿ ಕ್ಷೇತ್ರದ ಜೊತೆಗೆ ಬಾದಾಮಿಯಿಂದಲೂ ಸ್ಪರ್ಧಿಸಲಿದ್ದಾರೆ. ಆದರೆ, ಕಾಂಗ್ರೆಸ್ ಹೈಕಮಾಂಡ್ 2 ಕ್ಷೇತ್ರಗಳಲ್ಲಿ ಸ್ಪರ್ಧೆಗೆ ಗ್ರೀನ್ ಸಿಗ್ನಲ್ ನೀಡಿಲ್ಲ. ಇಂದು ದೆಹಲಿಯಲ್ಲಿ ಸಭೆ ನಡೆಸಲಿರುವ ಕಾಂಗ್ರೆಸ್ ಕೇಂದ್ರ ಚುನಾವಣಾ ಸಮಿತಿ ಸಿದ್ಧರಾಮಯ್ಯ ಅವರು 2 ಕ್ಷೇತ್ರಗಳಲ್ಲಿ ಸ್ಪರ್ಧಿಸುವ ಬಗ್ಗೆ ತೀರ್ಮಾನ ಕೈಗೊಳ್ಳಲಿದೆ. ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಜೆ.ಡಿ.ಎಸ್., ಬಿ.ಜೆ.ಪಿ. ನಾಯಕರು ಸಿ.ಎಂ. ಸೋಲಿಸಲು ಕಾರ್ಯತಂತ್ರ ರೂಪಿಸಿದ್ದಾರೆ. ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಗೆಲುವು ಸುಲಭವಾಗಿಲ್ಲ ಎನ್ನುವುದು ಸಿ.ಎಂ. ನಡೆಸಿದ ಖಾಸಗಿ ಸಮೀಕ್ಷೆಯಲ್ಲಿ...
ರಾಜಕೀಯ

Breaking News : ಮುಖ್ಯಮಂತ್ರಿ ಸಿದ್ದರಾಮಯ್ಯ ನಾಮಪತ್ರ ಸಲ್ಲಿಕೆ ವೇಳೆ ಲಾಠೀಚಾರ್ಜ್ – ಕಹಳೆ ನ್ಯೂಸ್

ಮೈಸೂರು: ಚುನಾವಣಾ ರಣಾಂಗಣವಾಗಿರುವ ಚಾಮುಂಡೇಶ್ವರಿ  ವಿಧಾನಸಭಾ ಕ್ಷೇತ್ರದ ಹುರಿಯಾಳುಗಳಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಶಾಸಕ ಜಿ.ಟಿ.ದೇವೇಗೌಡ ಅವರು ಶುಕ್ರವಾರ ನಾಮಪತ್ರ ಸಲ್ಲಿಸುತ್ತಿದ್ದು, ಭರ್ಜರಿ ಬಲ ಪ್ರದರ್ಶನ ಮಾಡಿದ್ದಾರೆ.  ಮೈಸೂರಿನ ಕೋಟೆ ಆಂಜನೇಯ ದೇವಸ್ಥಾನದ ಬಳಿ  ಏಕಕಾಲದಲ್ಲಿ ಜೆಡಿಎಸ್‌ ಮತ್ತು ಕಾಂಗ್ರೆಸ್‌ನ ಸಾವಿರಾರು ಕಾರ್ಯಕರ್ತರು ಜಮಾವಣೆಗೊಂಡು ಉದ್ವಿಗ್ನ ವಾತಾವರಣ ನಿರ್ಮಾಣವಾಯಿತು. ಸ್ಥಳದಲ್ಲಿದ್ದ ಪೊಲೀಸರು ಪರಿಸ್ಥಿತಿ ನಿಯಂತ್ರಿಸಲು ಲಘು ಲಾಠಿ ಚಾರ್ಜ್‌ ನಡೆಸಿದರು. ಮೊದಲು ಸಿದ್ದರಾಮಯ್ಯ ಅವರು ಮೆರವಣಿಗೆ ನಡೆಸಿ ನಾಮಪತ್ರ ಸಲ್ಲಿಸಲು ಸಮಯ...
ರಾಜಕೀಯ

ಮೈಸೂರಿನಲ್ಲಿ ಸಿದ್ದರಾಮಯ್ಯ ಪ್ರಚಾರ ; ಹತ್ತಿರ ಬಾರದ ಜನತೆ – ಕಹಳೆ ನ್ಯೂಸ್

ಮೈಸೂರು: ನಾಲ್ಕು ದಿನಗಳಿಂದ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಚಾರ ಕೈಗೊಂಡಿದ್ದಾರೆ. ಸೋಮವಾರ ಹಳ್ಳಿಗಳಿಗೆ ಭೇಟಿನೀಡಿದ ಸಮಯದಲ್ಲಿ ಜನರು ಅವರ ಹತ್ತಿರ ಹೆಚ್ಚಾಗಿ ಸುಳಿಯಲಿಲ್ಲ. ಬೆಳಿಗ್ಗೆ 10.30ಕ್ಕೆ ಕೆಲ್ಲಹಳ್ಳಿಗೆ ಭೇಟಿ ಕೊಟ್ಟಾಗ ಜನರು ಸೇರಿರಲಿಲ್ಲ. ಗ್ರಾಮದ ರಸ್ತೆಯಲ್ಲೇ ನಿಂತು ಪ್ರಚಾರ ಭಾಷಣ ಮಾಡಿದರು. ಮುಖ್ಯಮಂತ್ರಿಯ ಸುತ್ತ ಬೆರಳೆಣಿಕೆ ಜನರಷ್ಟೇ ಸೇರಿದ್ದು, ಅವರ ಮುಖದಲ್ಲಿ ಬೇಸರ ಮೂಡಿಸಿತು. ನಮ್ಮೂರಿಗೆ ಏನು ಮಾಡಿದ್ದೀರಿ?: ‘ಐದು ವರ್ಷ ಮುಖ್ಯಮಂತ್ರಿಯಾಗಿದ್ದೀರಿ. ನಮ್ಮೂರಿಗೆ ಏನು ಮಾಡಿದ್ದೀರಿ? ಇಲ್ಲಿನ ರಸ್ತೆ...
ಸುದ್ದಿ

ಜಿಲ್ಲಾಧಿಕಾರಿ ಡಿಸಿ ದೀಪ್ತಿ ಅದಿತ್ಯಾ ಕಾನಡೆ ತಲೆಗೆ ಹೊಡೆದ ಸಿಎಂ – ಕಹಳೆ ನ್ಯೂಸ್

ಚಿಕ್ಕಬಳ್ಳಾಪುರ: ಚುನಾವಣಾ ನೀತಿ ಸಂಹಿತೆ ಜಾರಿಯಾಗಿದೆ ಅಂತಾ ಎಚ್ಚರಿಸಿದ ಜಿಲ್ಲಾಧಿಕಾರಿ ಡಿಸಿ ದೀಪ್ತಿ ಅದಿತ್ಯಾ ಕಾನಡೆ ತಲೆಗೆ ಹೊಡೆದು ಹೆದರಬೇಡ ಅಂತಾ ಸಿಎಂ ಹೇಳಿರುವ ಘಟನೆಯೊಂದು ಇಂದು ನಡೆದಿದೆ. ಇಂದು ಸಿಎಂ ಸಿದ್ದರಾಮಯ್ಯ ಚಿಕ್ಕಬಳ್ಳಾಪುರದ ನಂದಿ ಗ್ರಾಮದ ನೂತ ಮೆಗಾಡೈರಿ ಉದ್ಘಾಟನೆಗಾಗಿ ಆಗಮಿಸಿದ್ರು. ಆದ್ರೆ ಚುನಾವಣೆ ನೀತಿ ಸಂಹಿತೆ ಜಾರಿಯಾದ ಹಿನ್ನೆಲೆಯಲ್ಲಿ ಕೇವಲ ಭೇಟಿ ನೀಡಿ ವೀಕ್ಷಣೆ ಮಾಡಿದ್ರು. ಈ ವೇಳೆ ಜಿಲ್ಲಾಧಿಕಾರಿಗಳು ಸಿಎಂ ಗೆ ಚುನಾವಣಾ ನೀತಿ ಸಂಹಿತೆ ಜಾರಿಯಾಗಿದೆ ಅಂತಾ...
ಸುದ್ದಿ

Exclusive : ಸಿಎಂ ಸಿದ್ದರಾಮಯ್ಯ ವೈರಲ್ ಡ್ಯಾನ್ಸ್ – ನಿಜವಾಗಿ ಈ ಡ್ಯಾನ್ಸ್ ಮಾಡಿದ್ದು ಯಾರು? ಕಹಳೆ ನ್ಯೂಸ್ ಗೆ ಸಿಕ್ಕಿದೆ ಉತ್ತರ…!

ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಸಿನಿಮಾ ಹಾಡಿಗೆ ಸಿಎಂ ಸಿದ್ದರಾಮಯ್ಯ ಡಾನ್ಸ್ ಮಾಡಿದ್ದಾರೆ ಎನ್ನುವ ವಿಡಿಯೋ ವೈರಲ್ ಆಗಿದೆ. ಆದರೆ ಈ ವಿಡಿಯೋದಲ್ಲಿ ನಿಜವಾಗಿ ಸಿಎಂ ಸಿದ್ದರಾಮಯ್ಯ ಡ್ಯಾನ್ಸ್ ಮಾಡಿಲ್ಲ. ಕಾರ್ಯಕ್ರಮ ಒಂದರಲ್ಲಿ ಸಿದ್ದರಾಮಯ್ಯನವರನ್ನು ಹೋಲುವ ವ್ಯಕ್ತಿಯೊಬ್ಬರು ಈ ರೀತಿ ಡ್ಯಾನ್ಸ್ ಮಾಡಿದ್ದಾರೆ. ಆದರೆ ಈ ವಿಚಾರವನ್ನು ತಿಳಿಯದ ಜನ ಸಿದ್ದರಾಮಯ್ಯನವರೇ ಡ್ಯಾನ್ಸ್ ಮಾಡಿದ್ದಾರೆ ಎಂದು ಬರೆದು ಸಾಮಾಜಿಕ ಜಾಲತಾಣದಲ್ಲಿ ಟೀಕೆ ಮಾಡುತ್ತಿದ್ದಾರೆ. ವೈರಲ್ ಆದ ಸಿದ್ಧರಾಮಯ್ಯ ಡ್ಯಾನ್ಸ್ - ದೃಶ್ಯ...
1 2
Page 1 of 2